Search This Blog

Monday 25 July 2016

Vandisuvudadiyali Gananathana Lyrics In Kannada ವಂದಿಸುವುದಾದಿಯಲಿ ಗಣನಾಥನ

ವಂದಿಸುವುದಾದಿಯಲಿ ಗಣನಾಥನ |
ಸಂದೇಹ ಸಲ್ಲ ಶ್ರೀ ಹರಿಯಾಜ್ಞೆ ಇದಕುಂಟು ||

ಹಿಂದೆ ರಾವಣ ತಾನು ವಂದಿಸದೆ ಗಜಮುಖನ
ನಿಂದು ತಪವನು ಗೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು ||||

ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೇ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||||

ಇಂದು ಜಗವೆಲ್ಲ ಉಮೆನಂದನನ ಪೂಜಿಸಲು
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿಪುರಂದರವಿಠಲನ ಸೇವೆಯೊಳು

ಬಂದ ವಿಘ್ನವ ಕಳೆದಾನಂದವನು ಕೊಡುವ ||||

No comments:

Post a Comment